ಚಿಕ್ಕಮಗಳೂರು: ಜನವರಿ 8ರಂದು ಶರಣಾಗಿದ್ದ ಆರು ನಕ್ಸಲರನ್ನು ಪೊಲೀಸರು ಬೆಂಗಳೂರಿನ ಎನ್ಐಎ ಕೋರ್ಟಿಗೆ ಹಾಜರುಪಡಿಸಿದ್ದರು. ಇಂದು ಶರಣಾಗಿರುವ ರವೀಂದ್ರ ಕೋಟೆಹೊಂಡ ಅವರನ್ನು ಯಾವ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಚಿಕ್ಕಮಗಳೂರು ಎಸ್ಪಿ ವಿಕ್ರಮ ಅಮಟೆ ರವೀಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲೇ 13 ಪ್ರಕರಣಗಳಿರುವುದರಿಂದ ಅವರನ್ನು ಶೃಂಗೇರಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆಂದು ಎಸ್ಪಿ ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ.
Kshetra Samachara
01/02/2025 05:09 pm