ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಡಿಯುವ ನೀರಿನ ಕೊಳವೆ ಮಾರ್ಗದ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ

ಹಾಸನ ಸುಮಾರು 34.50 ಲಕ್ಷಗಳ ಅನುದಾನದಲ್ಲಿ ನಗರಸಭಾ ವ್ಯಾಪ್ತಿಯ ಎಲ್.ವಿ ಪಾಲಿಟೆಕ್ನಿಕ್ ಇಂದ ಸತ್ಯಮಂಗಲ ಬಡಾವಣೆ ವರೆಗೆ ಕುಡಿಯುವ ನೀರಿನ ಕೊಳವೆ ಮಾರ್ಗವನ್ನು ಅಳವಡಿಸಲು ಕಾಮಗಾರಿಗೆ ಶಾಸಕ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಜನರಿಗೆ ಕುಡಿಯುವ ನೀರು ಪೂರೈಸುವ ಸಲುವಾಗಿ ಕೈಗೊಂಡಿರುವ ಕಾಮಗಾರಿ ಇದಾಗಿದ್ದು ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸಂಭಂದಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು

ಅತೀ ಶೀಘ್ರವಾಗಿ ಕಾಮಗಾರಿ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾಯಿತ ಸದಸ್ಯರುಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಹಿರಿಯರು, ಸ್ಥಳೀಯರು, ಸಾರ್ವಜನಿಕರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

01/02/2025 07:14 pm

Cinque Terre

480

Cinque Terre

0

ಸಂಬಂಧಿತ ಸುದ್ದಿ