ಹಿರಿಯೂರು: ಹಿರಿಯೂರು ತಾಲ್ಲೂಕಿನ ಆದಿವಾಲಫಾರಂ-ಪಟ್ರೇಹಳ್ಳಿ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಅಂಡರ್ ಪಾಸ್ ನಿರ್ಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಗ್ರಾಮಸ್ಥರು ಒತ್ತಾಯಿಸಿದರು.
ಈ ಹಿಂದೆ ನಿರ್ಮಿಸಿರುವ ಅಂಡರ್ಪಾಸ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ.ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು. ಅಲ್ಪ ಪ್ರಮಾಣದಲ್ಲಿ ಮಳೆ ಬಂದರೂ ನೀರು ನಿಲ್ಲುವುದರಿಂದ ಸಂಚಾರ ದುಸ್ತರವಾಗಿದೆ. ಇಷ್ಟು ಕೆಟ್ಟದಾಗಿರುವ ಅಂಡರ್ಪಾಸ್ ಪೂನಾ-ಬೆಂಗಳೂರು ಹೆದ್ದಾರಿಯಲ್ಲಿ ಎಲ್ಲಿಯೂ ಕಾಣಸಿಗದು ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
Kshetra Samachara
03/02/2025 09:37 am