ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಒಡ್ಡರ ಓಣಿಯಲ್ಲಿ ಮನೆ ಕಳ್ಳತನ ನಡೆಸಿ ನಗದು ಮತ್ತು ಬಂಗಾರ ಆಭರಣ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪಟ್ಟಣದ ಸುಭಾಶನಗರದ ಪ್ರವೀಣ ಭೋವಿ ಹಾಗೂ ಕ್ಯಾಸನಕೇರಿ ಗ್ರಾಮದ ರಾಕೇಶ ಹೆಬ್ಬಳ್ಳಿ, ಇಬ್ಬರು ಕಳ್ಳತನ ಮಾಡಿದ್ದಾರೆ ಎಂದು ಗುರುತಿಸಲಾಗಿದೆ.
ಇವರಿಬ್ಬರು ಸೇರಿಕೊಂಡು 27 ಜನವರಿ 2025ರಂದು ಪಟ್ಟಣದ ವಡ್ಡರ ಓಣಿಯಲ್ಲಿರುವ ಮನೆಯ ಹಿಂದಿನ ಬಾಗಿಲನ್ನು ತೆಗೆದು ಮನೆಯ ಒಳಗಡೆ ಹೋಗಿ ಯಾವುದೋ ಗಟ್ಟಿಯಾದ ವಸ್ತುವಿನಿಂದ ಮನೆಯಲ್ಲಿದ್ದ ಟ್ರಜರಿಯ ಬಾಗಿಲುನ್ನು ಮುರಿದು ಟ್ರಜರಿಯಲ್ಲಿಟ್ಟಿದ್ದ 30 ಸಾವಿಸ ಬೆಲೆಬಾಳುವ 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಸರ, 15 ಸಾವಿರ ರೂಪಾಯಿ ಬೆಲೆ ಬಾಳುವ 03 ಗ್ರಾಂ ತೂಕದ ಬಂಗಾರದ ಜಾಲರಿ, 15 ಸಾವಿರ ರೂಪಾಯಿ ಬೆಲೆಬಾಳುವ ಒಂದು ಜೊತೆ ಬೆಂಡೋಲೆ ಸೇರಿದಂತೆ ಎರಡು ಸಾವಿರ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.
ಈ ಬಗ್ಗೆ ಸುಭಾಶನಗರದ ವಡ್ಡರ ಓಣೆಯ ತಿಪ್ಪವ್ವಾ ಭೋವಿ ಎಂಬುವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸಿಸಿ ಕ್ಯಾಮರಾ ಸೇರಿದಂತೆ ಮಾಹಿತಿ ಕಲೆಹಾಕಿ ಆರೋಪೀತರಿಗೆ ದಸ್ತಗಿರಿ ಮಾಡಿ ದರೋಡೆ ಮಾಡಿದ 10 ಗ್ರಾಂ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್. ನಾರಾಯಣ, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಜಗದೀಶ ನಾಯ್ಕ , ಶಿರಸಿ ಡಿ.ಎಸ್.ಪಿ ಗಣೇಶ ಕೆ.ಎಲ್ ಮಾರ್ಗದರ್ಶನದಲ್ಲಿ ಸಿಪಿಐ ರಂಗನಾಥ ನೀಲಮ್ಮನವರ ಇವರ ನೇತೃತ್ವದಲ್ಲಿ ಪಿ.ಎಸ್.ಐ ಗಳಾದ ಪರಶುರಾಮ ಮಿರ್ಜಗಿ, ಹನುಮಂತ ಕುಡಗುಂಟಿ ಹಾಗೂ ಸಿಬ್ಬಂದಿ, ಮಂಜಪ್ಪ ಚಿಂಚಿಲಿ, ಕೋಟೇಶ್ವರ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ತಿರುಪತಿ ಚೌಡಣ್ಣನವರ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
Kshetra Samachara
03/02/2025 07:09 pm