ಯಲ್ಲಾಪುರ: ಭತ್ತದ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಣವೆಯು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಯಲ್ಲಾಪುರ ತಾಲೂಕಿನ ಬೊಂಡ್ಕೆಸರ ಗ್ರಾಮದಲ್ಲಿ ನಡೆದಿದೆ.
ಬಣವೆಗೆ ಬೆಂಕಿ ತಗುಲಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟೊತ್ತಿಗಾಗಲೇ ಭತ್ತದ ಬಣವೆಯು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು
Kshetra Samachara
03/02/2025 09:43 pm