", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/38659820250204074605filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ...Read more" } ", "keywords": "Node,Tumkur,News", "url": "https://publicnext.com/node" } ತುಮಕೂರು: ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.

ನಗರದಲ್ಲಿಂದು ಸಚಿವರ ಭೇಟಿಗಾಗಿ ಕಾದು ಕುಳಿತಿದ್ದ ವಿಕಲಚೇತನ ಗಂಗರಾಜು ಅವರನ್ನು ಕಂಡ ಸಚಿವರು ಹತ್ತಿದ್ದ ಕಾರಿನಿಂದಿಳಿದು ಗಂಗರಾಜು ಬಳಿ ತೆರಳಿ ಮನವಿ ಅರ್ಜಿ ಸ್ವೀಕರಿಸಿ ವಿಚಾರಿಸಿದರು.

ಹುಟ್ಟುವಾಗಲೇ ಶೇ.೮೦ರಷ್ಟು ಅಂಗವೈಕಲ್ಯ ಹೊಂದಿರುವ ಗಂಗರಾಜು ಅವರು ತುಮಕೂರು ತಾಲೂಕು ಕೋರ ಹೋಬಳಿ ಅರಕೆರೆ ಗ್ರಾಮ ಪಂಚಾಯತಿ ಹೊಸಹಳ್ಳಿ ಗ್ರಾಮದಲ್ಲಿ 20 x 15 ಜಾಗದಲ್ಲಿ ಸುಮಾರು 20 ವರ್ಷಗಳಿಂದ ಅಂಗಡಿಯನ್ನಿಟ್ಟುಕೊಂಡು ಬದುಕಿಗಾಗಿ ಆಸರೆ ಪಡೆದುಕೊಂಡಿದ್ದೇನೆ. ಸದರಿ ಜಾಗವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಪರಮೇಶ್ವರ ಸ್ಥಳದಲ್ಲಿದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಕೂಡಲೇ ಕ್ರಮ ಕೈಗೊಂಡು ವರದಿ ನೀಡಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/02/2025 07:46 pm

Cinque Terre

480

Cinque Terre

0