ಬೆಂಗಳೂರು: ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ಕಾರು ಚಾಲಕ ನಿದ್ರೆಗೆ ಜಾರಿದ ಘಟನೆ ಜಯ ನಗರದಲ್ಲಿ ನಡೆದಿದೆ. ಜಯನಗರದ ಈಸ್ಟ್ ಎಂಡ್ ಸರ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಅಂತ ತಿಳಿದು ಬಂದಿದೆ.
ಮಹಾರಾಷ್ಟ್ರ ನೋಂದಾಯಿತ ಕಾರು ಚಾಲಕ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿಯೇ ಕಾರು ನಿಲ್ಸಿದ್ರಿಂದ ಇತರೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಚಾಲಕನ ಬೇಜವಾಬ್ದಾರಿ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
PublicNext
05/02/2025 01:56 pm