ಚಿಕ್ಕಮಗಳೂರು: ಕಳೆದ 10 ದಿನಳಲ್ಲಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಎರಡು ಬಾರಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚಿನ ಕುರಿತು ಮಾಹಿತಿ ನೀಡಿರುವ ಚಿಕ್ಕಮಗಳೂರು ಡಿಎಫ್ಓ ರಮೇಶ್ ಬಾಬು ಎರಡು ಬಾರಿ ಘಟನೆಯಿಂದ ಸುಮಾರು 60 ಎಕರೆ ಪ್ರದೇಶ ಸುಟ್ಟು ಹೋಗಿದೆ. ಇದರಲ್ಲಿ ದೊಡ್ಡ ಮರಗಳು ಜೀವ ಸಂಕುಲಕ್ಕೆ ಯಾವುದೇ ತೊಂದರೆಯಾಗಿಲ್ಲ.
ಈ ಕುರಿತು ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತಿದೆ ಎಂದರು. ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ವ್ಯಾಪ್ತಿಯಲ್ಲಿರುವ ಜನರಿಗೆ ಅರಿವು ಮೂಡಿಸಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.
PublicNext
05/02/2025 04:48 pm