ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಧ್ವನವಮಿ ಉತ್ಸವ ಸಂಪನ್ನ - ದೇವರಿಗೆ ವಿಶೇಷ ಅಲಂಕಾರ, ಪೂಜೆ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು.

ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಶ್ರೀ ಅನಂತೇಶ್ವರ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯ ಮಧ್ವರ ಸನ್ನಿಧಾನದಲ್ಲಿ ನೂರಾರು ವಿಪ್ರ ಬಾಂಧವರು ಪಾರಾಯಣ ಮಾಡುತ್ತಿರುವಂತೆ, ಪರ್ಯಾಯ ಶ್ರೀಪಾದರು ವಾಯುಸ್ತುತಿ ಪಾರಾಯಣದೊಂದಿಗೆ ಮಧು ಅಭಿಷೇಕವನ್ನು ಮಾಡಿದರು. ಪುತ್ತಿಗೆ ಉಭಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿ ಆಚಾರ್ಯ ಮಧ್ವರಿಗೆ ದಂಡೋದಕವನ್ನು ನೀಡಿದರು.

ಜೊತೆಗೆ ಡಾ.ಅರಳು ಮಲ್ಲಿಗೆ ಪಾರ್ಥಸಾರಥಿಯವರಿಂದ ವಿಷ್ಣು ಸಹಸ್ರನಾಮ ಚಿಂತನೆ ಮತ್ತು ವಿಪ್ರರಿಂದ ಪಾರಾಯಣ ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ನಡೆಯಿತು. ಆಚಾರ್ಯ ಮಧ್ವರು ಹನುಮಂತ ದೇವರ ಅವತಾರದ ಹಿನ್ನಲೆಯಲ್ಲಿ ಶ್ರೀ ಕೃಷ್ಣ ಮಠದ ಪ್ರಾಣದೇವರಿಗೆ ಆಚಾರ್ಯ ಮಧ್ವರ ಅಲಂಕಾರವನ್ನು ಸುಂದರ ವಾಗಿ ಮಾಡಲಾಗಿತ್ತು. ಸಾವಿರಾರು ಮಂದಿ ಈ ವೈಭವವನ್ನು ಕಣ್ತುಂಬಿಕೊಂಡರು. ಕೃಷ್ಣಮಠದಲ್ಲಿ ಶ್ರೀ ಕೃಷ್ಣನಿಗೆ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಗೋಪಾಲಕೃಷ್ಣ ಅಲಂಕಾರವನ್ನು ಮಾಡಿ ಆರತಿಯನ್ನು ಬೆಳಗಿದರು. ನಂತರ ಪರ್ಯಾಯ ಶ್ರೀಪಾದರು ಮಹಾ ಪೂಜೆಯನ್ನು ನೆರವೇರಿಸಿದರು. ಮಧ್ವ ನವಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

Edited By :
PublicNext

PublicNext

06/02/2025 05:13 pm

Cinque Terre

16.32 K

Cinque Terre

0