", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/235762-1739026599-Untitled-design---2025-02-08T202632.810.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದರಿಂದ ಆಗುತ್ತಿರುವ ನಷ್ಟವನ್ನು ನಿಭಾಯಿಸಿಕೊಳ್ಳಲು ರಾಜ್ಯ ಸರಕಾರ ...Read more" } ", "keywords": "KSRTC loss, Supreme Court verdict, transportation company, government guarantee, financial setback, Karnataka State Road Transport Corporation, Indian transportation, court ruling, financial impact. ,,Politics", "url": "https://publicnext.com/node" } 'ಗ್ಯಾರಂಟಿ'ಯಿಂದ ಸಾರಿಗೆ ಸಂಸ್ಥೆಗೆ ನಷ್ಟ- ಸುಪ್ರೀಮ್ ಕೋರ್ಟ್‌ನಿಂದ KSRTC ಶಾಕ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಗ್ಯಾರಂಟಿ'ಯಿಂದ ಸಾರಿಗೆ ಸಂಸ್ಥೆಗೆ ನಷ್ಟ- ಸುಪ್ರೀಮ್ ಕೋರ್ಟ್‌ನಿಂದ KSRTC ಶಾಕ್

ಬೆಂಗಳೂರು: ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದರಿಂದ ಆಗುತ್ತಿರುವ ನಷ್ಟವನ್ನು ನಿಭಾಯಿಸಿಕೊಳ್ಳಲು ರಾಜ್ಯ ಸರಕಾರ ಹೆಣಗಾಡುತ್ತಿದೆ. ಏಕಾಏಕಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದೆ. ದೂರದ ಊರುಗಳಿಗೆ ಹೋಗುವ ರಾಜಹಂಸ, ಸ್ಲೀಪರ್​ ಕೋಚ್​ ಬಸ್​​ಗಳಿಗೆ ಒಂದೂವರೆ ಪಟ್ಟು ರೇಟ್​ ಆಗಿದೆ. ಕೆಲವು ಊರುಗಳಿಗೆ ಇದ್ದ ರಾಜಹಂಸ ಬಸ್​ ಅನ್ನು ರದ್ದು ಮಾಡಿ, ಸ್ಲೀಪರ್​ ಕೋಚ್​ ಹಾಕುವ ಮೂಲಕ, ಈ ಹೆಚ್ಚುವರಿ ಹಣ ತೆರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇಂತಹ ಮಾರ್ಗದಲ್ಲಿ ಸರಕಾರ ಸಾರಿಗೆ ವಿಚಾರದಲ್ಲಿ ಆಗುತ್ತಿರುವ ನಷ್ಟವನ್ನು ಸರಿದೂಗಿಸುತ್ತಿದೆ.

ಇದಾಗಲೇ, ಕೆಎಸ್​ಆರ್​ಟಿಸಿ ಬಸ್​ ದರಕ್ಕೆ ಪೈಪೋಟಿ ನೀಡುತ್ತಿರುವ ಕೆಲವು ಖಾಸಗಿ ಬಸ್​ಗಳು, ಅದಕ್ಕಿಂತ ಕಡಿಮೆ ದರವನ್ನು ಇಟ್ಟು, ಪ್ರಯಾಣಿಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿವೆ. ಇವೆಲ್ಲವುಗಳ ನಡುವೆಯೇ, ಕೆಎಸ್​ಆರ್​ಟಿಸಿಗೆ ಬಿಗ್​ ಶಾಕ್​ ಒಂದನ್ನು ಸುಪ್ರೀಂಕೋರ್ಟ್​ ನೀಡಿದೆ. 2003ರಲ್ಲಿ ಎಸ್​.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾರಿಗೆ ಬಸ್​ಗೆ ಸಂಬಂಧಿಸಿದಂತೆ ಇದ್ದ ಕಾಯ್ದೆಗೆ ಸುಪ್ರೀಂಕೋರ್ಟ್​ ಅಸ್ತು ಎಂದಿದೆ. ಈ ಮೂಲಕ KSRTCಯ ಏಕಸ್ವಾಮ್ಯವನ್ನು ತೆಗೆದುಹಾಕಿದೆ.

ಈ ಬಗ್ಗೆ ಇನ್ನೂ ಸುಲಭದಲ್ಲಿ ಹೇಳಬೇಕು ಎಂದಾದರೆ, ಇನ್ನು ಮುಂದೆ ಖಾಸಗಿ ಬಸ್​ಗಳು ಯಾವ ಊರುಗಳಿಗೆ, ಯಾವ ಪ್ರದೇಶಗಳಿಗೆ ಬೇಕಾದರೂ ಹೋಗಬಹುದಾಗಿದೆ. ಇಲ್ಲಿಯವರೆಗೆ ಇದ್ದ ನಿಯಮ ಏನೆಂದರೆ, ಖಾಸಗಿ ಬಸ್​ಗಳಿಗೆ ಎಲ್ಲಾ ರೂಟ್​ಗಳಲ್ಲಿ ಕೆಎಸ್​ಆರ್​ಟಿಸಿ ಅವಕಾಶ ನೀಡುತ್ತಿರಲಿಲ್ಲ. ಎಲ್ಲಿ ಜನಸಂಖ್ಯೆ ಕಡಿಮೆ ಇದೆ, ವರ್ಕ್​ಔಟ್​ ಆಗುವುದಿಲ್ಲ ಎನ್ನುವ ಕೆಲವು ಕಡೆಗಳಲ್ಲಿ ಖಾಸಗಿ ಬಸ್​ಗಳಿಗೆ ಸರ್ಕಾರ ಅನುಮತಿ ನೀಡುತ್ತಿತ್ತು. ಕೆಲವೇ ಕೆಲವು ಊರುಗಳಿಗೆ ಮಾತ್ರ ಖಾಸಗಿ ಮತ್ತು ಕೆಎಸ್​ಆರ್​ಟಿಸಿ ಬಸ್​ ಈಗ ಚಲಿಸುತ್ತಿವೆಯಾದರೂ, ಎಷ್ಟೋ ರೂಟ್​ಗಳಲ್ಲಿ ಜನರು ಸರ್ಕಾರಿ ಬಸ್​ಗೆ ಕಾದು ಕುಳಿತುಕೊಳ್ಳುವ ಅನಿವಾರ್ಯತೆ ಇದೆ.

Edited By : Nagaraj Tulugeri
PublicNext

PublicNext

08/02/2025 08:26 pm

Cinque Terre

14.79 K

Cinque Terre

1

ಸಂಬಂಧಿತ ಸುದ್ದಿ