", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/222042-1739098780-Add-a-heading---2025-02-09T162822.108.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ರಾಯ್‌ಪುರ್: ಛತ್ತೀಸ್‌ಗಢದಲ್ಲಿ ನಕ್ಸಲ್‌ವಾದವನ್ನು ಕೊನೆಗೊಳಿಸಲು ನಡೆಸಲಾಗುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪಡೆ ಸಿಬ್ಬಂದಿ ನಿರಂ...Read more" } ", "keywords": "Maoist encounter, Chhattisgarh news, Bijapur encounter, security personnel killed, Maoist insurgency, Naxalite attack, Indian security forces, Chhattisgarh police. ,,Crime,Law-and-Order", "url": "https://publicnext.com/node" } ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಮೃತ ದೇಹಗಳು ಪತ್ತೆ - ಇಬ್ಬರು ಸೈನಿಕರು ಹುತಾತ್ಮ, ಇಬ್ಬರಿಗೆ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಮೃತ ದೇಹಗಳು ಪತ್ತೆ - ಇಬ್ಬರು ಸೈನಿಕರು ಹುತಾತ್ಮ, ಇಬ್ಬರಿಗೆ ಗಾಯ

ರಾಯ್‌ಪುರ್: ಛತ್ತೀಸ್‌ಗಢದಲ್ಲಿ ನಕ್ಸಲ್‌ವಾದವನ್ನು ಕೊನೆಗೊಳಿಸಲು ನಡೆಸಲಾಗುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪಡೆ ಸಿಬ್ಬಂದಿ ನಿರಂತರವಾಗಿ ಯಶಸ್ಸನ್ನು ಪಡೆಯುತ್ತಿದ್ದಾರೆ. ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭಾನುವಾರ ಸೈನಿಕರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಮತ್ತಿಬ್ಬರು ಸೈನಿಕರಿಗೆ ಗಾಯವಾಗಿವೆ . ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಆರಂಭಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಟು ಮಾವೋವಾದಿಗಳು ಸಾವನ್ನಪ್ಪಿದ ಒಂದು ವಾರದ ನಂತರ ಈ ಎನ್‌ಕೌಂಟರ್ ನಡೆದಿದೆ. ಬಿಜಾಪುರದಲ್ಲಿಯೇ ಜನವರಿ 31 ರಂದು ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದು ಎಂಟು ಮಾವೋವಾದಿಗಳು ಸಾವನ್ನಪ್ಪಿದ್ದರು.

ಎನ್​ಕೌಂಟರ್ ಸಮಯದಲ್ಲಿ ಆರಂಭದಲ್ಲಿ 12 ಮಾವೋವಾದಿಗಳ ಸಾವು ಸಂಭವಿಸಿದ್ದರೂ ನಂತರ ಮೃತರ ಸಂಖ್ಯೆ 31ಕ್ಕೆ ಏರಿದೆ ಎಂದು ಐಜಿ ಬಸ್ತಾರ್ ಪಿ ಸುಂದರರಾಜ್ ದೃಢಪಡಿಸಿದರು.

ಬಿಜಾಪುರ ಮತ್ತು ನಾರಾಯಣಪುರಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ ಗಡಿಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿದ್ದಾಗ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಐಜಿ ಪಿ ಸುಂದರರಾಜ್ ತಿಳಿಸಿದ್ದಾರೆ.

ಬಸ್ತಾರ್ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ನಿರಂತರವಾಗಿ ಕ್ರಮಕೈಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

09/02/2025 04:29 pm

Cinque Terre

31.51 K

Cinque Terre

0